ಕೈಯೊಡ್ಡಿ ಪ್ರಸಾದವ ಕೊಂಡಡೆ ಕರ್ಮಧಾರಿ. ಶೇಷಪ್ರಸಾದವನಾಯ್ದು ಕೊಂಡಡೆ ವರ್ಮಹೀನ. ಉಕ್ಕುಳಪ್ರಸಾದವ ಕೊಂಡಡೆ ಸತ್ಕ್ರೀಗೆ ಸಲ್ಲ. ಇಂತಿವನರಿದು ಸಜ್ಜನಪ್ರಸಾದವ ನಿರ್ಧರದಿಂದ ಕೊಂಬ ಮಹಾಪ್ರಸಾದಿಯ ಕಾರುಣ್ಯವೆನಗೆಂದಿಗೆ ಸಾಧ್ಯವಪ್ಪುದು ? ಕುಂಭೇಶ್ವರಲಿಂಗದಲ್ಲಿ ಜಗನ್ನಾಥವವರಿದವಂಗಲ್ಲದೆ ಸಾಧ್ಯವಲ್ಲ
ಶಿಕ್ಷಣ EDUCATION

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ

by 1 on | 2026-08-20 16:41:18

Share: Facebook | Twitter | Whatsapp | Linkedin | Visits: 70


ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ

ದಿನಾಂಕ ೨೯ ಜುಲೈ ೨೦೨೬ ರಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆಯ ಅಂಗವಾಗಿ ನಾಡಿನ ಶ್ರೇಷ್ಠ ಸಂತ, ಜ್ಞಾನಯೋಗಿ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರ  ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಪೂಜೆ ನೆರವೇರಿಸುವ ಮೂಲಕ ಗುರುಪೂರ್ಣಿಮೆಯನ್ನು ಭಕ್ತಿಭಾವದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಪತಿ, ಡಾ. ಅರುಣ ಇನಾಮದಾರ ಅವರು ಮಾತನಾಡುತ್ತ ಪೂಜ್ಯ ಶ್ರೀ ಸಿದ್ದೇಶ್ವರ ಸ್ವಾಮೀಜಿಯವರು ಜಾತಿ, ಮತ, ಪಂಥಗಳ ಭೇದವಿಲ್ಲದೆ ಎಲ್ಲರಿಗೂ ಜೀವನದ ಸಾರ್ಥಕತೆಯನ್ನು ತಿಳಿಸುವ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡಿದ್ದರು. ಅವರ ಸರಳ ಜೀವನ, ನಿಸ್ವಾರ್ಥ ಸೇವೆ ಹಾಗೂ ಮೌಲ್ಯಾಧಾರಿತ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದ್ದು ಅವರ  ಆದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳುವುದು ಅವರಿಗೆ ಸಲ್ಲಿಸುವ ನಿಜವಾದ ಗೌರವವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಹಿರಿಯ ಉಪಪ್ರಾಚಾರ್ಯ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಉಪಪ್ರಾಚಾರ್ಯ ಡಾ. ಆನಂದ ಪಿ. ಅಂಬಲಿ, ಪರೀಕ್ಷಾ ನಿಯಂತ್ರಣಾಧಿಕಾರಿ ಡಾ. ಎಸ್. ಎಸ್. ದೇವರಮನಿ, ಪ್ರೊ. ಡಾ. ಆರ್. ಜಿ. ಕುಲಕರ್ಣಿ, ಡೀನ್ ಮತ್ತು ಪ್ರಾಂಶುಪಾಲರು, ಕಾನೂನು ಶಾಲೆ, ಡಾ. ಉದಯಕುಮಾರ ನುಚ್ಚಿ, ಡಾ. ಶ್ರೀನಿವಾಸ ರಾಯ್ಕರ್, ಡಾ. ದೀಪಾ ಸಜ್ಜನರ, ಡಾ. ಸುರೇಖಾ ಹಿಪ್ಪರಗಿ, ಡಾ. ಪ್ರಕಾಶ ಪಾಟೀಲ, ಡಾ. ವಿಜಯಕುಮಾರ ವಾರದ, ಡಾ. ಪ್ರವೀಣ ಗಂಗನಹಳ್ಳಿ, ಡಾ. ಮಂಜುಳಾ, ಡಾ. ಶ್ರೀಧರ ಬಗಲಿ ಹಾಗೂ ವಿಶ್ವವಿದ್ಯಾಲಯದ ಸಿಬ್ಬಂದಿ ಉಪಸ್ಥಿತರಿದ್ದರು.

Search
Recent News
Popular News
Most Popular
ಬಿ.ಎಲ್.ಡಿ.ಇ ಸಂಸ್ಥೆ ಮತ್ತು ಅಲೆನ್ ಕರಿಯರ್ ಅಕಾಡೆಮಿ ಮಧ್ಯೆ ಶೈಕ್ಷಣಿಕ ಓರಿಯಂಟೇಶನ್ ಕಾರ್ಯಕ್ರಮದ ಕ್ಷಣಗಳು.
Vachana Pitamaha P. G. Halakatti College of Engineering
Nursing College Jamkhandi
BLDEA Nursing College Vijayapura
Vachana Pitamaha P. G. Halakatti College of Engineering Vijayapura
ಡಾ ಫ ಗು ಹಳಕಟ್ಟಿ, ಬಂಥನಾಳ ಶಿವಯೋಗಿಗಳು, ಡಾ ಬಿ ಎಂ ಪಾಟೀಲ್ ಹಾಗೂ ಬಂಗಾರಮ್ಮ ಸಜ್ಜನ ಅವರ ಸ್ಮರಣೆ ಕಾರ್ಯಕ್ರಮ

Leave a Comment