by 7 on | 2024-08-28 12:56:42
Share: Facebook | Twitter | Whatsapp | Linkedin | Visits: 383
ನಗರದ ಬಿ. ಎಲ್. ಡಿ. ಇ ಡೀಮ್ಡ್ ವಿಶ್ವವಿದ್ಯಾನಿಲಯದ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಚಿಕ್ಕಮಕ್ಕಳ ತಜ್ಞ ಡಾ. ಎಂ. ಎಂ. ಪಾಟೀಲ ಮತ್ತು ಅವರ ತಂಡ ಬರೆದ ರಸಾಯನಿಕ ಸಿಂಪಡಿಸಿದ ದ್ರಾಕ್ಷಿ ಸೇವನೆಯಿಂದ ಉಂಟಾಗುವ ವಿಷಪ್ರಭಾವ ಎಂಬ ಮಹತ್ವದ ಲೇಖನ ವಿಶ್ವದ ಮಟ್ಟದಲ್ಲಿ ಪ್ರಸಿದ್ಧವಾದ ಮೆಡಿಕಲ್ ಜರ್ನಲ್ ಗ್ಲೋಬಲ್ ಹೆಲ್ತ್ ಕೇಸ್ ರಿಪೋರ್ಟ್ ನಲ್ಲಿ ಪ್ರಕಟವಾಗಿದೆ.
ಈ ಲೇಖನವು ಗ್ರಾಮೀಣ ಪ್ರದೇಶಗಳಲ್ಲಿ ಕಂಡುಬರುವ ಒಂದು ಮುಖ್ಯ ಸಮಸ್ಯೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಬೆಳಕಿಗೆ ತಂದಿದೆ. ದ್ರಾಕ್ಷಿಯನ್ನು ತಿನ್ನುವ ಮುನ್ನ ಅದನ್ನು ಸ್ವಚ್ಛಗೊಳಿಸದೆ ಇರುವುದರಿಂದ ಉಂಟಾಗುವ ಸಮಸ್ಯೆಗಳು ವಿಶೇಷವಾಗಿ ರಾಸಾಯನಿಕ ಕೀಟನಾಶಕಗಳಿಂದ ಎದುರಾಗುವ ಅಪಾಯಗಳ ಕುರಿತು ಈ ಲೇಖನ ಸಂಪೂರ್ಣ ಮಾಹಿತಿ ಹೊಂದಿದೆ. ಗ್ರಾಮೀಣ ಭಾಗದ ಮಕ್ಕಳು ಎದುರಿಸುವ ಹಾನಿಕಾರ ಸಮಸ್ಯೆಗಳಿಗೆ ಒಳಗಾಗುವುದನ್ನು ಹೇಗೆ ತಪ್ಪಿಸಬಹುದು ಎಂಬುದರ ಕುರಿತು ಕೂಡ ಈ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.
ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ಶಿಕ್ಷಣದ ಕೊರತೆ ಎಷ್ಟು ಗಂಭೀರವಾಗಿದೆ ಎಂಬುದನ್ನು ಈ ಲೇಖನದಲ್ಲಿ ಎತ್ತಿ ತೋರಿಸಲಾಗಿದ್ದು, ಮಕ್ಕಳಲ್ಲಿ ಈ ರೀತಿಯ ರೋಗ ಲಕ್ಷಣಗಳನ್ನು ಗುರುತಿಸುವುದು ಮತ್ತು ತ್ವರಿತ ಚಿಕಿತ್ಸೆ ನೀಡುವುದು ಎಷ್ಟು ಮುಖ್ಯ ಎಂಬುದರ ಮೇಲೂ ಈ ಲೇಖನ ಬೆಳಕು ಚೆಲ್ಲಿದೆ. ಅಲ್ಲದೇ, ತೊಳೆಯದೆ ಇರುವ ದ್ರಾಕ್ಷಿ ಹಣ್ಣುಗಳ ಸೇವನೆಯ ಅಭ್ಯಾಸದಿಂದ ಮಕ್ಕಳ ಮೇಲೆ ಉಂಟಾಗುವ ಆರೋಗ್ಯ ಹಾನಿಯ ಬಗ್ಗೆ ಮಹತ್ವದ ಎಚ್ಚರಿಕೆಯನ್ನು ಮೂಡಿಸಲಾಗಿದೆ.
ಡಾ. ಎಂ. ಎಂ. ಪಾಟೀಲ ಅವರ ತಂಡದಲ್ಲಿ ಸಂಶೋಧನೆ ಕೇಂದ್ರದ ಉಪನಿರ್ದೇಶಕಿ ಡಾ. ಚಂದ್ರಿಕಾ ದೊಡ್ಡಿಹಾಳ, ಡಾ. ಅನ್ವಿತಾ ಸಿನ್ಹಾ ಹಾಗೂ ಡಾ. ಪ್ರಸನ್ನ ಕುಮಾರ ಬಿ.ಎಂ ಸಹ-ಲೇಖಕರಾಗಿದ್ದಾರೆ.
ಅಂತಾರಾಷ್ಟ್ರೀಯ ಖ್ಯಾತಿಯ ಜರ್ನಲ್ ನಲ್ಲಿ ಲೇಖನ ಪ್ರಕಟವಾಗಿರುವುದ ಈ ಸಾಧನೆಗೆ ವಿವಿ ಕುಲಾಧಿಪತಿ ಎಂ. ಬಿ. ಪಾಟೀಲ, ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ, ಕುಲಪತಿ ಪ್ರೊ. ಆರ್. ಎಸ್. ಮುಧೋಳ, ಸಮಕುಲಪತಿ ಪ್ರೊ. ಅರುಣ ಇನಾಮದಾರ, ರಜಿಸ್ಟ್ರಾರ್ ಡಾ. ರಾಘವೇಂದ್ರ ವಿ. ಕುಲಕರ್ಣಿ ಹಾಗೂ ಪ್ರಾಚಾರ್ಯ ಪ್ರೊ. ಅರವಿಂದ ಪಾಟೀಲ, ಅಲೈಡ್ ಹೆಲ್ತ್ ಸಾಯಿನ್ಸ್ ಡೀನ್ ಡಾ. ಎಸ್. ವಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.
ಬಿ.ಎಲ್.ಡಿ.ಇ (ಡೀಮ್ಡ್ ವಿಶ್ವವಿದ್ಯಾಲಯ)ದಲ್ಲಿ ಶ್ರೀ ಬಿ. ಎಂ. ಪಾಟೀಲರ ಪುಣ್ಯಸ್ಮರಣೆ ಹಾಗೂ ಬಂಥನಾಳ ಪೂಜ್ಯ ಶ್ರೀ ಸಂಗನಬಸವ ಶಿವಯೋಗಿಗಳ ಜನ್ಮದಿನ ಆಚರಣೆ
ಬಿ.ಎಲ್.ಡಿ.ಇ. (ಡೀಮ್ಡ್ ವಿಶ್ವವಿದ್ಯಾಲಯ) ಮಕ್ಕಳ ಶಾಸ್ತ್ರ ವಿಭಾಗ ಹಾಗೂ ಭಾರತೀಯ ಮಕ್ಕಳ ವೈದ್ಯರ ಅಕಾಡೆಮಿಯ ವಿಜಯಪುರ ಘಟಕದ ಸಹಯೋಗದಲ್ಲಿ ಹೃದಯ–ಶ್ವಾಸಕೋಶ ಪುನರುಜ್ಜೀವನ (ಸಿಪಿಆರ್) ಜಾಗೃತಿ ಕಾರ್ಯಕ್ರಮ ಯಶಸ್ವಿ
ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಗುರುಪೂರ್ಣಿಮೆ
ಉಕ್ಕಲಿ ಆರೋಗ್ಯ ಕೇಂದ್ರದಲ್ಲಿ ಬಿ.ಎಲ್.ಡಿ.ಇ. ವಿಶ್ವವಿದ್ಯಾಲಯದಿಂದ ಮಹತ್ವದ ಟೆಲಿಮೆಡಿಸಿನ್ ಯೋಜನೆಗೆ ಚಾಲನೆ
ವ್ಯಕ್ತಿಯ ಸಾಮರ್ಥ್ಯ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ಎಐ ಪಾತ್ರ ಪ್ರಮುಖವಾಗಿದೆ"
ಕ್ರೈಂ ಥ್ರಿಲ್ಲರ್ “ಕಲುಷ” ಟೀಸರ್ ಬಿಡುಗಡೆ ಇದೇ ಮಾರ್ಚ್ 23
ಕಲುಷ ಕನ್ನಡ ಚಲನಚಿತ್ರ
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 07/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 06/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 05/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 04/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 03/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
? 02/09/2026 — 12 ರಾಶಿಗಳ ದಿನದ ರಾಶಿ ಭವಿಷ್ಯ ?
ಇಂದಿನ ರಾಶಿ ಭವಿಷ್ಯ (01-09-2026)